23
ಹೊಸಕೋಟೆ : ನಗರದ ಚಂದುಶ್ರೀ ಬಾರ್ ಅಂಡ್ ಲಾಡ್ಜ್ ನಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ನಗದು ವಶಪಡಿಸಿಕೊಂಡಿದ್ದಾರೆ.
ಹೊಸಕೋಟೆ ಉಪ ವಿಭಾಗದ ಡಿವೈಎಸ್ಪಿ ಮಲ್ಲೇಶ್ ನೇತೃತ್ವದಲ್ಲಿ ಸಿಪಿಐ ಗೋವಿಂದ್ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿ ಮೇರಿಗೆ ಚಂದುಶ್ರೀ ಬಾರ್ ಅಂಡ್ ಲಾಡ್ಜ್ ಮೇಲೆ ದಾಳಿ ಮಾಡಿದ್ದಾರೆ. ದಾಳಿ ಸಮಯದಲ್ಲಿ ಕಾನೂನು ಬಾಹಿರವಾಗಿ ಅಂದರ್ ಬಾಹರ್ ಇಸ್ಟೀಟ್ ಆಟದಲ್ಲಿ ತೊಡಗಿದ್ದ ೧೧ ಜನ ಹಾಗೂ ಆಟಕ್ಕೆ ಪಣವಾಗಿಟ್ಟಿದ್ದ ೨.೫೨ ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಡಿವೈಎಸ್ಪಿ ಮಲ್ಲೇಶ್ ತಿಳಿಸಿದ್ದಾರೆ.

