18
ಬೆಂಗಳೂರು ಗ್ರಾಮಾಂತರ : ಹೊಸಕೋಟೆ ತಾಲೂಕು ಸೂಲಿಬೆಲೆ ಹೋಬಳಿ ದೊಡ್ಡಕೋಲಿಗ ಗ್ರಾಮದಲ್ಲಿ ಶ್ರೀ ವೀರಬ್ರಹ್ಮೇಂದ್ರಸ್ವಾಮಿ ಸೇವಾ ಸಮಿತಿಯಿಂದ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ಶ್ರೀ ವೀರಬ್ರಹ್ಮೇಂದ್ರಸ್ವಾಮಿ ಹಾಗೂ ಕಾಳಿಕಾಂಭ ಕಮಟೇಶ್ವರ ಸ್ವಾಮಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.
ದೇವತಾ ಮೂರ್ತಿಗಳ ಪ್ರತಿಷ್ಠಾಪನೆ,ಕುಂಭಾಭೀಷೇಕ ಕಾರ್ಯಕ್ರಮ ನಡೆಯಿತು.ಹೋಮ,ಹವನ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮ ಗಳು ಸುಗಮ ನಡೆಯಿತು.
ಶಿವಸುಜ್ಞಾನ ತೀರ್ಥ ಸ್ವಾಮೀಜಿ, ಮಾಜಿ ಸಂಸದ ಬಿ.ಎನ್ ಬಚ್ಚೇಗೌಡ ರು,ವೀರಭದ್ರ ಸ್ವಾಮಿ,ಹಿರಿಯ ಮುಖಂಡ ಬಿ.ಎನ್ ಗೋಪಾಲಗೌಡರು,ಬಮೂಲ್ ನಿರ್ದೇಶಕ ಬಿ.ವಿ ಸತೀಶ್ ಗೌಡರು, ಗ್ರಾಮದ ಹಿರಿಯ ಮುಖಂಡ ತಮ್ಮೇಗೌಡ,ಶಿವಕುಮಾರ್,ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.



