226
ಹೊಸಕೋಟೆ : ತಾಲೂಕಿನ ನಂದಗುಡಿ ಹೋಬಳಿ ಇಟ್ಟಸಂದ್ರ ಗ್ರಾಮದ ಟಿ.ವೆಂಕಟೇಶ್ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರೇತರ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಸಾಮಾಜಿಕ ಪಿಡಗುಗಳಾದ ವರದಕ್ಷಿಣೆ, ಮಕ್ಕಳ ಹಕ್ಕುಗಳು,ಬಾಲ್ಯ ವಿವಾಹ ತಡೆ, ಪೋಕ್ಸೋ ಬಗೆ ಜಾಗೃತಿ, ರಸ್ತೆ ಸುರಕ್ಷತೆ ಬಗೆ ಸಾರ್ವಜನಿಕರು ಮತ್ತು ಶಾಲೆ ಮಕ್ಕಳಿಗೆ ಅರಿವು, ಜೀತ ಪದ್ದತಿ ನಿರ್ಮೂಲನೆ ಸೇರಿದಂತೆ ಹಲವಾರು ಇತ್ಯಾದಿ ಸಾಮಾಜಿಕ ಚಟುವಟಿಕೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಕಾನೂನು ಸೇವಾ ಪ್ರಾಧಿಕಾರದ ಧ್ಯೇಯೋದ್ದೇಶಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರನ್ನು ಪ್ರಾಧಿಕಾರ ಅಧಿಕಾರೇತರ ಸದಸ್ಯರನ್ನಾಗಿ ನೇಮಕ ಮಾಡಿದೆ.

