Home ರಾಜ್ಯಜಿಲ್ಲೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಭೇಟಿ

ಜಿಲ್ಲೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡ ಭೇಟಿ

ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿ

by Editor

ಬೆಂಗಳೂರು ಗ್ರಾಮಾಂತರ : ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸರಕಾರದ ವಿಶೇಷ ಮಾನಿಟರ್ ಆಗಿರುವ ಉಮಾಕಾಂತ್ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಹಾಗೂ ದೇವನಹಳ್ಳಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಇವರ ನೇತೃತ್ವದಲ್ಲಿ ಸ್ಥಳೀಯ ಸರಕಾರದ ಆಡಳಿತ ವೈಖರಿ, ಯೋಜನೆಗಳ ಅನುಷ್ಠಾನ, ಸ್ಥಳೀಯ ಸರಕಾರದ ಮುಖೇನ ಸಂವಿಧಾನದ ಧೇಯೋದ್ದೇಶಗಳನ್ನು ಸಾಕಾರಗೊಳಿಸುವಲ್ಲಿ ಎದುರಾಗುತ್ತಿರುವ ಸವಾಲುಗಳು ಹಾಗೂ ಇತ್ಯಾದಿಗಳ ಕುರಿತು ಅಧ್ಯಯನವನ್ನು ನಡೆಸಿದರು.

ಈ ವೇಳೆ ಬೆಂಗಳೂರು ನಗರ ಯೋಜನಾ ನಿರ್ದೇಶಕರಾದ ಮೋಹನ್ ಕುಮಾರ್, ನೋಮೇಶ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಗ್ರಾಮ ಪಂಚಾಯತ್ ಕಾರ್ಯದರ್ಶಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Spread the love

You may also like

Leave a Comment

ಯಳಚಹಳ್ಳಿಯಲ್ಲಿ ದಲಿತರ ಭೂಮಿ ಕಬಳಿಸಲು ಯತ್ನ   ಸೂಲಿಬೆಲೆ ಹೋಬಳಿಯಲ್ಲಿ 2.25 ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳು   ೫೦ ಕೋಟಿ ರೂ ವೆಚ್ಚದಲ್ಲಿ ಕೋಲ್ಡ್ ಸ್ಟೋರೇಜ್ ಸ್ಥಾಪನೆ   ಡಾ.ವಸಂತಿ ಅಮರ್ ನೂತನ ಸಿಇಒ   ಬಮೂಲ್ ಕಾರ್ಮಿಕರ ಶ್ರಮದಿಂದಲೇ ಒಕ್ಕೂಟದ ಅಭಿವೃದ್ಧಿ : ಬಿ.ವಿ ಸತೀಶ್‌ಗೌಡ