126
ಬೆಂಗಳೂರು ಗ್ರಾಮಾಂತರ : ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ(ಸಿಇಒ) ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಡಾ.ಕೆ.ಎನ್ ಅನುರಾಧ ಅವರು ಕರ್ತವ್ಯ ನಿರ್ವಹಿಸಿದ್ದರು.ಇತ್ತೀಚ್ಚಿಗೆ ಇವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಸರಕಾರ ನೇಮಕ ಮಾಡಿತ್ತು. ಜಿಲ್ಲಾಧಿಕಾರಿ ಹುದ್ದೆ ಜತೆಗೆ ಪ್ರಭಾರ ಸಿಇಒ ಆಗಿ ಡಾ.ಕೆ.ಎನ್ ಅನುರಾಧ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಐಎಎಸ್ ೨೦೧೭ನೇ ಬ್ಯಾಚ್ ಅಧಿಕಾರಿಯಾಗಿದ್ದಾರೆ.


