87
ಬೆಂಗಳೂರು ಗ್ರಾಮಾಂತರ : april 21
ದೊಡ್ಡಬಳ್ಳಾಪುರ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಹಾಡ ಹಗಲೇ ಮನೆಯ ಬೀಗ ಮುರಿದು ದುಷ್ಕರ್ಮಿಗಳು ಲಕ್ಷಾಂತರ ರೂ ಬೆಲೆ ಬಾಳುವ ಚಿನ್ನ,ನಗದು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಮನೆಯೊಂದರ ಬೀಗ ಮುರಿದು ಒಳ ಹೊಕ್ಕಿರುವ ದುಷ್ಕರ್ಮಿಗಳು ಮನೆಯಲ್ಲಿ ಚಿನ್ನಾಭರಣ,ಹಣ ದೋಚಿ ಪರಾರಿಯಾಗಿದ್ದಾರೆ.೧೦ ಗ್ರಾಂ ಗೊಲ್ಡ್ ಚೈನ್ ,ಚಿನ್ನದ ಬ್ರಸ್ಲೆöÊಟ್,ನೆಕ್ಲೇಸ್,ಉಂಗುರು,ಕಾಲ್ಗಜ್ಜೆ,೧ ಲಕ್ಷ ೩೦ ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.ಘಟನೆ ವಿಷಯ ತಿಳಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

