73
ವಿಜಯ ನ್ಯೂಸ್,ಹಾಸನ ಮೇ.17
ಮಂಗಳೂರಿನಿಂದ ಬೆಂಗಳೂರಿಗೆ ಹೊರಟ್ಟಿದ್ದ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಚಾಲಕನ ಸಮಯ ಪ್ರಜ್ಜೆಯಿಂದ 36 ಪ್ರಯಾಣಿಕರು ಪಾರಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಟೈರ್ ಗೆ ಬೆಂಕಿ ಹತ್ತಿಕೊಂಡಿದ್ದನ್ನು ಗಮನಿಸಿದ ಚಾಲಕ ಬಸ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ನಿದ್ದೆಯ ಮಂಪರಿನಲ್ಲಿದ್ದ 36 ಪ್ರಯಾಣಿಕರನ್ನು ಎಬ್ಬಿಸಿದ್ದಾನೆ.
ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ. 36 ಪ್ರಯಾಣಿಕರು ಸುರಕ್ಷಿತವಾಗಿ ಬಸ್ನಿಂದ ಕೆಳಗೆ ಇಳಿಸಿದ ಚಾಲಕನ ಸಮಯ ಪ್ರಜ್ಜೆ ಅನೇಕರ ಜೀವ ಉಳಿಯಲು ಕಾರಣವಾಯಿತು.
ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಘಟನೆ,ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಘಟನೆ ನಡೆದಿದೆ.ಬೆಂಕಿಯ ರಭಸಕ್ಕೆ ಸಂಪೂರ್ಣವಾಗಿ ಬಸ್ ಸುಟ್ಟು ಕರಕಲಾಗಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರ ಸಾಹಸಪಟ್ಟರು.

